ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ದೆಹಲಿಗೆ ನೀರು ಒದಗಿಸುವಂತೆ ಉಪವಾಸ ಸತ್ಯಾಗ್ರಹ - ದೆಹಲಿ ಸಚಿವೆ ಆಸ್ಪತ್ರೆಗೆ ದಾಖಲು

09:08 AM Jun 25, 2024 IST | Bcsuddi
Advertisement

ನವದೆಹಲಿ : ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಸಚಿವೆ ಅತಿಶಿ ಆರೋಗ್ಯ ಹೆದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪವಾಸ ಸತ್ಯಾಗ್ರಹದ ನಾಲ್ಕನೇ ದಿನವಾದ ಸೋಮವಾರ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದರು. ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು, ಆದರೂ ಅವರು ನಿರಾಕರಿಸಿದ್ದರು. ಸೋಮವಾರ ರಾತ್ರಿ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣ 43ಕ್ಕೆ ಕುಸಿದಿತ್ತು, ಮಂಗಳವಾರ ಬೆಳಗಿನ ಜಾವ 36ಕ್ಕೆ ಕುಸಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದು ದಿನಗಳಿಂದ ಅವರು ಏನನ್ನೂ ತಿಂದಿಲ್ಲ, ಹರ್ಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದೆಹಲಿಯು ನೀರಿನ ಕೊರತೆಯನ್ನು ಎದುರಿಸುತ್ತಿರುವಾಗ, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದಿನಕ್ಕೆ 100 ಮಿಲಿಯನ್ ಗ್ಯಾಲನ್ (ಎಂಜಿಡಿ) ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅತಿಶಿ ಆರೋಪಿಸಿದ್ದಾರೆ.

Advertisement

Advertisement
Next Article