For the best experience, open
https://m.bcsuddi.com
on your mobile browser.
Advertisement

ದೆಹಲಿ ಚಲೋ ವೇಳೆ ಅಶ್ರವಾಯು ಪ್ರಯೋಗ - ಪೊಲೀಸರ ವಿರುದ್ದ ಫೆ.16ರಂದು ದೇಶಾದ್ಯಂತ ರಸ್ತೆ ತಡೆ

04:13 PM Feb 14, 2024 IST | Bcsuddi
ದೆಹಲಿ ಚಲೋ ವೇಳೆ ಅಶ್ರವಾಯು ಪ್ರಯೋಗ   ಪೊಲೀಸರ ವಿರುದ್ದ ಫೆ 16ರಂದು ದೇಶಾದ್ಯಂತ ರಸ್ತೆ ತಡೆ
Advertisement

ನವದೆಹಲಿ: ರೈತರ ದೆಹಲಿ ಚಲೋ ಪ್ರತಿಭಟನೆಯನ್ನು ತಡೆಯಲು ಹರ್ಯಾಣ ಪೊಲೀಸರು ರೈತರ ಮೇಲೆ ಅಶ್ರವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದು, ಪೊಲೀಸರ ವರ್ತನೆ ಖಂಡಿಸಿ ದೇಶಾದ್ಯಾಂತ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನ ಮಾಡಿವೆ.

ಈ ಬಗ್ಗೆ ಮಾಹಿತಿ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ರೈತರ ಮೇಲೆ ನಡೆಸಿರುವ ಪೈಶಾಚಿಕ ದೌರ್ಜನ್ಯವನ್ನು ಖಂಡಿಸಲು ದೇಶದಾದ್ಯಂತ ಪ್ರತಿಭಟಿಸಿ ಗ್ರಾಮೀಣ ಮಟ್ಟದಲ್ಲಿ ರಸ್ತೆ ಬಂದ್ ಮಾಡಲು ತಿರ್ಮಾನಿಸಿದೆ ಎಂದರು.

Advertisement

ಇನ್ನು ಎಲ್ಲಾ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಫೆ.16) ರಂದು ಬೆಳಿಗ್ಗೆ 11 ರಿಂದ 1 ಗಂಟೆವರೆಗೂ ರಸ್ತೆ ಬಂದ್ ಚಳುವಳಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Author Image

Advertisement