ದೆಹಲಿ ಮದ್ಯ ನೀತಿ ಪ್ರಕರಣ - ಇಡಿ ವಿಚಾರಣೆಗೆ ಬರಲ್ಲ ಎಂದ ಕ್ರೇಜಿವಾಲ್
03:00 PM Nov 02, 2023 IST
|
Bcsuddi
Advertisement
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರು ವಿಚಾರಣೆಗೆ ಹಾಜರಾಗುವುದಿಲ್ಲ, ನಿಮ್ಮ ನೋಟಿಸ್ನ್ನು ವಾಪಸ್ಸು ಪಡೆದುಕೊಳ್ಳಿ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.
Advertisement
ಅರವಿಂದ್ ಕ್ರೇಜಿವಾಲ್ ಅವರಿಗೆ ಅ.31ರಂದು ಸಂಜೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿತ್ತು. ಆದರೆ ಇದಕ್ಕೆ ಯಾವುದೇ ಉತ್ತರ ನೀಡದ ಅರವಿಂದ್ ಕ್ರೇಜಿವಾಲ್ ಅವರಿಗೆ ಇಂದು ಮತ್ತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಇದೀಗ ಕ್ರೇಜಿವಾಲ್ ಇಡಿ ವಿಚಾರಣೆಗೆ ಹಾಜರಾಗುವುದಿಲ್ಲ, ನಿಮ್ಮ ನೋಟಿಸ್ನ್ನು ವಾಪಸ್ಸು ಪಡೆದುಕೊಳ್ಳಿ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ.
ಇನ್ನು ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಪರವಾಗಿ ಪ್ರಚಾರಕ್ಕಾಗಿ ಹೋಗುತ್ತಿರುವಾಗ ಇಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
Next Article