For the best experience, open
https://m.bcsuddi.com
on your mobile browser.
Advertisement

'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್

04:54 PM May 18, 2024 IST | Bcsuddi
 ದೇವರಾಜೇಗೌಡನಿಗೆ ತಲೆ ಕೆಟ್ಟಿದೆ ಆಸ್ಪತ್ರೆಗೆ ಸೇರಿಸಬೇಕು   ಡಿಕೆ ಶಿವಕುಮಾರ್
Advertisement

ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ಆತನಿಗೆ ತಲೆ ಕೆಟ್ಟಿದೆ. ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಬಿಜೆಪಿ ಮುಂಖಡ ವಕೀಲ ದೇವರಾಜೇಗೌಡ ಅವರು ಇದೆರೆಲ್ಲದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು, ನಾನು ದೇವರಾಜೇಗೌಡರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷ ಎಂದ ಮೇಲೆ ಸಾವಿರಾರು ಜನ ಭೇಟಿಯಾಗಿ ಹೋಗುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದು ನುಡಿದಿದ್ದಾರೆ.

ಆರೋಪ ಮಾಡಬೇಕು ಮಾಡುತ್ತಾರೆ. ಏನೇನೊ ಆಗುತ್ತೆ ನೀವು ದೊಡ್ಡದಾಗಿ ಮಾಡುತ್ತಿದ್ದೀರಿ. ಮಾಧ್ಯಮಗಳಿಗೆ ನಿಮ್ಮದೇ ಆದ ಇಮೇಜ್ ಇದೆ. ಮುಖಪುಟದಲ್ಲಿ ನ್ಯೂಸ್ ಕೂಡ ಆಗಿದೆ. ಅವರ ಬಗ್ಗೆ ಅಲ್ಲ, ನಿಮ್ಮ ಬಗ್ಗೆ ಬೇಜಾರ್ ಆಗುತ್ತಿದೆ ಎಂದರು.

Advertisement

Author Image

Advertisement