ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ.ರೇವಣ್ಣ, ಆಸ್ಪತ್ರೆಗೆ ದಾಖಲು
03:47 PM Jul 17, 2024 IST
|
Bcsuddi
Advertisement
ಹಾಸನ: ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಏಕಾದಶಿ ಪ್ರಯುಕ್ತ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ. ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು ಈ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಪಕ್ಕೆಲುಬು ನೋವಿನ ಹಿನ್ನೆಲೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ಎಚ್.ಡಿ.ರೇವಣ್ಣ ಅವರನ್ನು ದಾಖಲು ಮಾಡಲಾಗಿದೆ. ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿದ್ದಾರೆ. ಎಚ್.ಡಿ.ರೇವಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
Next Article