For the best experience, open
https://m.bcsuddi.com
on your mobile browser.
Advertisement

'ದೇವೇಗೌಡರಿಗೆ ರಾಜಕೀಯ ಹೇಳಿಕೊಡುವಷ್ಟು ದೊಡ್ಡವರು ಯಾರೂ ಇಲ್ಲ'- ಬೊಮ್ಮಾಯಿ

03:02 PM Apr 16, 2024 IST | Bcsuddi
 ದೇವೇಗೌಡರಿಗೆ ರಾಜಕೀಯ ಹೇಳಿಕೊಡುವಷ್ಟು ದೊಡ್ಡವರು ಯಾರೂ ಇಲ್ಲ   ಬೊಮ್ಮಾಯಿ
Advertisement

ಹಾವೇರಿ: ದೇವೇಗೌಡರು ಇರುವ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವುದು ಅತ್ಯಂತ ಖಂಡನೀಯ. ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ರೌಡಿಸಂನ್ನು ಜನರು ತಿರಸ್ಕಾರ ಮಾಡುತ್ತಾರೆ. ಇದು ಕಾಂಗ್ರೆಸ್ ನವರ ಹತಾಶೆ ತೋರಿಸುತ್ತದೆ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ದೇವೇಗೌಡರು ಎಂದರು.

ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎನ್ನುವ ಎಚ್.ಡಿ.ಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನವರು ಮಹಿಳೆಯರ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಹೇಳಿದರು.

Advertisement

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ದೇವೇಗೌಡರಿಗೆ ರಾಜಕೀಯ ಹೇಳಿಕೊಡುವಷ್ಟು ದೊಡ್ಡವರು ಯಾರೂ ಇಲ್ಲ. ಸಿದ್ದರಾಮಯ್ಯ ಸಹ ದೇವೇಗೌಡರ ಗರಡಿಯಲ್ಲಿ ಪಳಗಿದವರು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂಗೆ ತಿರುಗೇಟು ನೀಡಿದರು.

Author Image

Advertisement