'ದೇಶ ಕಟ್ಟುವ ಸಲುವಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ'- ಸಚಿವ ರಾಜನಾಥ್ ಸಿಂಗ್
12:14 PM May 10, 2024 IST
|
Bcsuddi
Advertisement
ಲಖನೌ: ಪಕ್ಷದ ಚುನಾವಣಾ ಪ್ರಣಾಳಿಕೆಯ ಪ್ರತಿಯೊಂದು ಭರವಸೆಯನ್ನು ನಾವು ಈಡೇರಿಸಿದ್ದೇವೆ. ದೇಶ ಕಟ್ಟುವ ಸಲುವಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
Advertisement
ರಾಜಕೀಯ ನಾಯಕರ ನಡೆ ಮತ್ತು ಮಾತಿನ ನಡುವಿನ ವ್ಯತ್ಯಾಸದಿಂದಾಗಿ ದೇಶದಲ್ಲಿ ವಿಶ್ವಾಸದ ಬಿಕ್ಕಟ್ಟು ಉದ್ಭವಿಸಿದೆ. ಆದರೆ, ಬಿಜೆಪಿ ನುಡಿದಂತೆ ನಡೆದಿದೆ. ಸಂಪತ್ತು, ಜ್ಞಾನ, ವಿಜ್ಞಾನ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಭಾರತವನ್ನು ನಿರ್ಮಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಜನರಲ್ಲಿ ಜವಾಬ್ದಾರಿಯ ಪ್ರಜ್ಞೆ ಮೂಡಿದಾಗ ಮಾತ್ರ ದೇಶದಲ್ಲಿ ರಾಮರಾಜ್ಯ ಸ್ಥಾಪನೆಯಾಗುತ್ತದೆ. ಜವಾಬ್ದಾರಿ ಇಲ್ಲದೆ ಬರೀ ಅಧಿಕಾರವನ್ನು ಹೊಂದಿದ್ದರೆ ರಾಮರಾಜ್ಯ ಸ್ಥಾಪನೆ ಎಂದಿಗೂ ಆಗುವುದಿಲ್ಲ. ಹಿಂದಿನ ಕಾಲಕ್ಕೆ ಹೋಲಿಸಿದರೆ, ಇಂದಿನ ಜನರಲ್ಲಿ ದೇಶದ ಬಗ್ಗೆ ಸ್ವಾಭಿಮಾನದ ಭಾವನೆ ಬೆಳೆದಿದೆ ಎಂದರು.
Next Article