ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಧರ್ಮಸ್ಥಳ: ಚುನಾವಣಾ ಯುದ್ಧಕ್ಕೂ ಮುನ್ನ ದೇವರ ದರ್ಶನ ಪಡೆಯುವುದು ನನ್ನ ರೂಢಿ- ಡಿಕೆಶಿ

03:01 PM Mar 26, 2024 IST | Bcsuddi
Advertisement

ಧರ್ಮಸ್ಥಳ: ಯಾವಾಗಲೂ ಧರ್ಮ ಯುದ್ಧಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದರಂತಿ ಈ ಬಾರಿಯೂ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನನ್ನು ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಚುನಾವಣಾ ಯುದ್ಧವನ್ನು ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ರೂಢಿ ಇಟ್ಟುಕೊಂಡಿದ್ದೇನೆ. ನಾನು ರೂಢಿ ಮಾಡಿಕೊಂಡಿರುವ ಪದ್ಧತಿಯಂತೆ ಧರ್ಮಸ್ಥಳಕ್ಕೆ ಬಂದಿದ್ದೇನೆ ಎಂದರು.

ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾವು ಪಂಚ ಗ್ಯಾರೆಂಟಿಗಳನ್ನು ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇನ್ನೂ ಹೆಚ್ಚಿನ ಶಕ್ತಿ ನೀಡಿ ಎಂದು ಆ ದೇವರಲ್ಲಿ ಪ್ರಾರ್ಥಿಸಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ ಎಂದು ಹೇಳಿದ್ದಾರೆ.

Advertisement
Next Article