ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಧರ್ಮಸ್ಥಳ : 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

10:24 AM Sep 23, 2024 IST | BC Suddi
Advertisement

ಧರ್ಮಸ್ಥಳ: ಎಂಟು ಶತಮಾನಗಳಿಂದ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಹಾಗೂ ಸಾಮಾಜಿಕಸಾಮರಸ್ಯದ ಶ್ರದ್ಧಾಕೇಂದ್ರವಾಗಿ ಬೆಳೆಯುತ್ತಿರುವ, ಬೆಳಗುತ್ತಿರುವ ಪವಿತ್ರ ಕ್ಷೇತ್ರ ಧರ್ಮಸ್ಥಳವು ಭಕ್ತರಿಗೆ ಕಲಿಯುಗದ ಕಲ್ಪವೃಕ್ಷವಾಗಿದೆ. ಇಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಬಾಹುಬಲಿ ಬೆಟ್ಟ, ಅಣ್ಣಪ್ಪಬೆಟ್ಟ, ಪ್ರಶಾಂತ ಪ್ರಾಕೃತಿಕ ಪರಿಸರ, ಪವಿತ್ರ ಪುಣ್ಯನದಿ ನೇತ್ರಾವತಿ – ಎಲ್ಲವುಗಳ ದರ್ಶನ ಮಾಡಿದಾಗ ನಮ್ಮ ಮಾನಸಿಕ ದುಃಖ, ದುಮ್ಮಾನಗಳೆಲ್ಲ ದೂರವಾಗಿ ಶಾಂತಿ, ನೆಮ್ಮದಿ ಸಿಗುತ್ತದೆ. ಧರ್ಮಸ್ಥಳವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಂಸ್ಕಾರದ ಪ್ರೇರಣೆ ಮತ್ತು ಸ್ಪೂರ್ತಿಯ ಕೇಂದ್ರವಾಗಿದೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಳಿದರು.

Advertisement

Advertisement
Next Article