ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

10:57 AM Oct 29, 2023 IST | Bcsuddi
Advertisement

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಧ್ವಜಸ್ತಂಭ ನೆಡುವಾಗ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ.

Advertisement

ಪ್ರಜ್ವಲ್ ಚನ್ನಗೌಡ ಮುನೇಪ್ಪನವರ(18) ಮೃತ ದುರ್ದೈವಿಯಾಗಿದ್ದಾನೆ.

ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ಸ್ಥಳೀಯ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿರ್ಮಿಸಿ ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು. ಶನಿವಾರ ಸಂಜೆ ಧ್ವಜಸ್ತಂಭ ನೆಡುವ ಸಂದರ್ಭ ಅಲ್ಲಿಯೇ ಹಾದು ಹೋಗಿದ್ದ ಸರ್ವೀಸ್ ವಿದ್ಯುತ್ ತಂತಿಗೆ ಧ್ವಜಸ್ತಂಭ ತಾಗಿದೆ. ಇದರಿಂದಾಗಿ ಕಂಬ ಹಿಡಿದಿದ್ದ ಪ್ರಜ್ವಲ್​​ಗೆ ವಿದ್ಯುತ್ ಪ್ರವಹಿಸಿದೆ. ತಕ್ಷಣ ಕುಸಿದುಬಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದರು ಮೃತಪಟ್ಟಿದ್ದಾನೆಂದು ಘೋಷಿಸಿದ್ದಾರೆ.

ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಪ್ರಜ್ವಲ್, ದೈಹಿಕ ಪರೀಕ್ಷೆಗಾಗಿ ತಯಾರಾಗುತ್ತಿದ್ದರು. ಅಷ್ಟರೊಳಗೆ ಅವಘಡ ಸಂಭವಿಸಿದ್ದು, ಮನೆ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Advertisement
Next Article