ನಟ ದರ್ಶನ್ ಖೈದಿ ನಂಬರ್ 6106
06:28 PM Jun 22, 2024 IST | Bcsuddi
Advertisement
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ವಿಚಾರಣಾಧೀನ ಖೈದಿ ನಂಬರ್ 6106 ನೀಡಲಾಗಿದೆ. ಕೊಲೆ ಕೇಸ್ನಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ನ್ನು 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶಿಸುತ್ತಿದ್ದಂತೆ ಪ್ರಕರಣದ ಆರೋಪಿಗಳನ್ನೆಲ್ಲ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದ್ದು ಆರೋಪಿಗಳಿಗೆ ಖೈದಿ ನಂಬರ್ ನೀಡಲಾಗಿದೆ. ಅದರಂತೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ವಿಚಾರಣಾಧೀನ ಖೈದಿ ನಂಬರ್ 6106 ನೀಡಲಾಗಿದೆ. ದರ್ಶನ್ ಇದೀಗ ಎರಡನೇ ಬಾರಿಗೆ ಜೈಲು ಪಾಲಾಗಿದ್ದಾರೆ.