ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಟ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಮೂವರು ಸಾವು.!

07:31 AM Jan 08, 2024 IST | Bcsuddi
Advertisement

 

Advertisement

ಗದಗ : ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ದುರ್ಮರಣ ಹೊಂದಿ ಇನ್ನು ಮೂವರು ಯುವಕರಿಗೆ ಗಂಭೀರವಾದಂತ ಗಾಯಗಳಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುರಣಗಿ ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಡೆದಿರುವಂತಹ ಘಟನೆಯಾಗಿದ್ದು, ಘಟನೆ ಸಂಭವಿಸಿದೆ.

ನಟ ಯಶ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟುವ ವೇಳೆ ಬ್ಯಾನರನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ತಗುಲಿದಾಗ ವಿದ್ಯುತ್ ಶಾಕ್ ಆಗಿ ಮೂರು ಯುವಕರು ದುರ್ಮರಣ ಹೊಂದಿದ್ದಾರೆ.

ಹನುಮಂತ್ ಹರಿಜನ್ (21) ಮುರಳಿ ನಡುವಿನಮನಿ (20) ನವೀನ್ (19) ಮೃತ ದುರ್ದೈವಿಗಳಾಗಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ದುರಂತದಲ್ಲಿ ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮಂಜುನಾಥ್ ದೀಪ ಹರಿಜನ್ ಹಾಗೂ ಪ್ರಕಾಶ್ ಎಂಬ ಯುವಕರಿಗೆ ಗಂಭೀರವಾದಂತಹ ಗಾಯಗಳಾಗಿವೆ  ಎಂದು ತಿಳಿದುಬಂದಿದೆ.

Tags :
ನಟ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಮೂವರು ಸಾವು.!
Advertisement
Next Article