ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಪಿತೂರಿ ನಡೆಯುತ್ತಿದೆ'- ಡಿಕೆಶಿ

05:26 PM Jan 01, 2024 IST | Bcsuddi
Advertisement

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಆದರೂ ಯಾವ ಲೆಕ್ಕಾಚಾರದಲ್ಲಿ ಕೊಟ್ಟಿದ್ದಾರೆ ಗೊತ್ತಿಲ್ಲ. ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲಾ ಬಂದಿದೆ. ಆಮೇಲೆ ವೈಯಕ್ತಿಕವಾಗಿ ನನ್ನ ಬಳಿ ಬರುತ್ತಾರೆ. ಅವರಿಗೆ ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ ಎಂದು ಗರಂ ಆದರು.

ನಾನು ಏನು ತಪ್ಪು ಮಾಡಿಲ್ಲ ನಾನು ಹೆದರಲ್ಲ. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಮುಂದಿನ ಪ್ರೊಸೀಜರ್ ಲೋಕಾಯುಕ್ತ ನೋಡಿಕೊಳ್ಳುತ್ತದೆ ತನಿಖೆ ನಡೆಸುತ್ತೆ ಎಂದರು.

Advertisement
Next Article