'ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ, ಈಗ ಮತ್ತೆ ಕಾಲೇಜಿಗೆ ಹೋಗುವೆ' ಎಂದ ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್
04:22 PM Dec 23, 2023 IST
|
Bcsuddi
Advertisement
ಮಂಡ್ಯ: 'ಹಿಜಾಬ್ ನಿಷೇಧ ವಾಪಸ್ ಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದೇಶ ಹಿಂಪಡೆಯುವ ನಿರ್ಧಾರದಿಂದ ಖುಷಿಯಾಗಿದೆ.
Advertisement
ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ. ಈಗ ಮತ್ತೆ ಕಾಲೇಜಿಗೆ ಹೋಗುತ್ತೇನೆ' ಎಂದು ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್ ಸ್ವಾಗತಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಸ್ಕಾನ್, 'ಕೋರ್ಟ್ನಿಂದ ನ್ಯಾಯ ಸಿಗುವ ವಿಶ್ವಾಸವಿದೆ. ಹಿಜಾಬ್ನಿಂದ ವಿದ್ಯಾಭ್ಯಾಸ ಬಿಟ್ಟಿದ್ದವರು ವಾಪಸ್ ಕಾಲೇಜಿಗೆ ಬನ್ನಿ. ಮಕ್ಕಳ ಶಿಕ್ಷಣದಲ್ಲೂ ರಾಜಕೀಯ ಮಾಡಬಾರದು. ನಮ್ಮ ಹಕ್ಕು ನಮಗೆ ನೀಡಿದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
Next Article