For the best experience, open
https://m.bcsuddi.com
on your mobile browser.
Advertisement

'ನಮ್ಮ ಕ್ಷೇತ್ರದ 126 ಕೋಟಿ ರೂ. ಅನುದಾನ ಇನ್ನೂ ಹಿಂತಿರುಗಿಸಿಲ್ಲ' - ಮುನಿರತ್ನ ಆರೋಪ

04:22 PM Nov 09, 2023 IST | Bcsuddi
 ನಮ್ಮ ಕ್ಷೇತ್ರದ 126 ಕೋಟಿ ರೂ  ಅನುದಾನ ಇನ್ನೂ ಹಿಂತಿರುಗಿಸಿಲ್ಲ    ಮುನಿರತ್ನ ಆರೋಪ
Advertisement

ಬೆಂಗಳೂರು: ನಮ್ಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸುಮಾರು 126 ಕೋಟಿ ರೂ. ಅನುದಾನವನ್ನು ಬಿಜೆಪಿ ಸರ್ಕಾರ ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದರು ಈವರೆಗೆ ಕ್ಷೇತ್ರದ 126 ಕೋಟಿ ಅನುದಾನ ನನಗೆ ಹಿಂತಿರುಗಿಸಿಲ್ಲ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಅನುದಾನ ಹಿಂತಿರುಗಿಸುವಂತೆ ಸಂಸದ ಡಿಕೆ ಸುರೇಶ್ ಅವರಿಗೆ ಮನವಿ ಮಾಡುತ್ತೇನೆ. ಯಾವ ಕಾಮಗಾರಿಗೆ ನಾವು ಅನುದಾನ ತಂದಿದ್ದೆವೋ ಅದನ್ನು ಮತ್ತೆ ನಮಗೆ ಕೊಡಿ. ಇದು ನಿಮ್ಮ ಲೋಕಸಭಾ ವ್ಯಾಪ್ತಿಗೆ ಬರುವಂತಹ ಅನುದಾನ. ರಾಜಕೀಯದ ಬಗ್ಗೆ ನಾನು ಮಾತನಾಡಲ್ಲ ಎಂದರು.

ಇನ್ನು ಮಾಜಿ ಸಿಎಂ ಯಡಿಯೂರಪ್ಪನವರು ನನ್ನ ಬಳಿ ಅನುದಾನ ಹಿಂತಿರುಗಿಸಿದ್ದಾರ ಎಂದು ಕೇಳಿದ ಸಂದರ್ಭ ನಾನು ಇಲ್ಲ ಎಂದು ಹೇಳಿದ್ದೆ. ನಾನು ಕಾಮಗಾರಿಗಳನ್ನು ವೀಕ್ಷಣೆ ಮಾಡುತ್ತೇನೆ. ಕಾಮಗಾರಿ ವೀಕ್ಷಣೆಗೆ ದಿನಾಂಕ ನಿಗದಿ ಮಾಡುವಂತೆ ಯಡಿಯೂರಪ್ಪ ಸೂಚಿಸಿದ್ದರು. ಅದರ ಪ್ರಕಾರ ಇವತ್ತು ವೀಕ್ಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

Advertisement

Author Image

Advertisement