ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನರೇಂದ್ರ ಮೋದಿಯವರು ನಾಯಕತ್ವದಿಂದ ಕೆಳಗಿಳಿಯಬೇಕು'- ಪಿ.ಚಿದಂಬರಂ

11:35 AM Jun 05, 2024 IST | Bcsuddi
Advertisement

ನವದೆಹಲಿ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ತನ್ನ ಪಕ್ಷದ ಸೋಲಿಗೆ ಕಾರಣವಾದ ನರೇಂದ್ರ ಮೋದಿ ಅವರು ಸರ್ಕಾರ ರಚಿಸುವ ಹಕ್ಕನ್ನು ಕಳೆದುಕೊಂಡಿದ್ದು, ನಾಯಕತ್ವದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ತಿಳಿಸಿದ್ದಾರೆ.

Advertisement

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 303 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿಯು 370 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿತ್ತು. ಆದರೆ, 240 ಸ್ಥಾನಗಳಿಗೆ ಕುಸಿಯುವ ಮೂಲಕ ಹೀನಾಯ ಸೋಲು ಕಂಡಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರದಿಂದ ನಿರುದ್ಯೋಗ ಮತ್ತು ಬೆಲೆ ಏರಿಕೆ, ಹಣದುಬ್ಬರದ ಸವಾಲುಗಳನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಗೆ ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆದಿತ್ತು. ನಿನ್ನೆ ಈ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 543 ಲೋಕಸಭಾ ಸ್ಥಾನಗಳ ಪೈಕಿ 291ರಲ್ಲಿ ಬಿಜೆಪಿ ನೇತೃತ್ವದ 'ಎನ್‌ಡಿಎ' ಮೈತ್ರಿಕೂಟ ಗೆಲುವು ಸಾಧಿಸಿದೆ. ಈ ಮೂಲಕ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

Advertisement
Next Article