For the best experience, open
https://m.bcsuddi.com
on your mobile browser.
Advertisement

'ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ' - ಜಗದೀಶ್ ಶೆಟ್ಟರ್

09:45 AM Jan 09, 2024 IST | Bcsuddi
 ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ    ಜಗದೀಶ್ ಶೆಟ್ಟರ್
Advertisement

ಧಾರವಾಡ: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಜಗದೀಶ ಶೆಟ್ಟರ್ ಸೋತಿದ್ದು, ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು.

ಇನ್ನು ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ ಎಂದಿದ್ದಾರೆ.

Advertisement

Author Image

Advertisement