For the best experience, open
https://m.bcsuddi.com
on your mobile browser.
Advertisement

'ನಾನು ಬಿಜೆಪಿ- ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ'- ಜನಾರ್ದನ ರೆಡ್ಡಿ

12:19 PM Feb 18, 2024 IST | Bcsuddi
 ನಾನು ಬಿಜೆಪಿ  ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ   ಜನಾರ್ದನ ರೆಡ್ಡಿ
Advertisement

ಕೊಪ್ಪಳ: ನಾನು ಮತ್ತೆ ಬಿಜೆಪಿಗೆ ಸೇರುವ, ಪಕ್ಷ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಅದರಲ್ಲೂ ಕಾಂಗ್ರೆಸ್ ಸೇರುವುದಂತೂ ಕನಸಿನಲ್ಲೂ ಆಗದ ಮಾತು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು, ದೇಶದ ಜನರು ಪ್ರಧಾನಿ ಮೋದಿಯ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೆಆರ್ ಪಿಪಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಹೊರತು ಯಾವುದೇ ಕಾರಣಕ್ಕೆ ನಾನು ಬಿಜೆಪಿ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಇದರ ಕುರಿತಾಗಿ ನನ್ನ ಜೊತೆ ಮಾತನಾಡಿರುವ ಹಿರಿಯ ನಾಯಕರಿಗೆ ನನ್ನ ಅಭಿಪ್ರಾಯಗಳನ್ನು ಈಗಾಗಲೇ ತಿಳಿಸಿದ್ದೇನೆ ಎಂದಿದ್ದಾರೆ.

Advertisement

Author Image

Advertisement