ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನಾನು ಬಿಜೆಪಿ- ಕಾಂಗ್ರೆಸ್ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ'- ಜನಾರ್ದನ ರೆಡ್ಡಿ

12:19 PM Feb 18, 2024 IST | Bcsuddi
Advertisement

ಕೊಪ್ಪಳ: ನಾನು ಮತ್ತೆ ಬಿಜೆಪಿಗೆ ಸೇರುವ, ಪಕ್ಷ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಅದರಲ್ಲೂ ಕಾಂಗ್ರೆಸ್ ಸೇರುವುದಂತೂ ಕನಸಿನಲ್ಲೂ ಆಗದ ಮಾತು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

Advertisement

ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ ಅವರು, ದೇಶದ ಜನರು ಪ್ರಧಾನಿ ಮೋದಿಯ ಅವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೆಆರ್ ಪಿಪಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಹೊರತು ಯಾವುದೇ ಕಾರಣಕ್ಕೆ ನಾನು ಬಿಜೆಪಿ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಇದರ ಕುರಿತಾಗಿ ನನ್ನ ಜೊತೆ ಮಾತನಾಡಿರುವ ಹಿರಿಯ ನಾಯಕರಿಗೆ ನನ್ನ ಅಭಿಪ್ರಾಯಗಳನ್ನು ಈಗಾಗಲೇ ತಿಳಿಸಿದ್ದೇನೆ ಎಂದಿದ್ದಾರೆ.

Advertisement
Next Article