For the best experience, open
https://m.bcsuddi.com
on your mobile browser.
Advertisement

'ನಾನು ಸುಳ್ಳು ಹೇಳುತ್ತೇನೆ ಎನ್ನುವುದಾದರೆ ರಾಜಕೀಯ ಬಿಟ್ಟು ಬಿಡುತ್ತೇನೆ' - ಸಿದ್ದರಾಮಯ್ಯ

06:34 PM Feb 09, 2024 IST | Bcsuddi
 ನಾನು ಸುಳ್ಳು ಹೇಳುತ್ತೇನೆ ಎನ್ನುವುದಾದರೆ ರಾಜಕೀಯ ಬಿಟ್ಟು ಬಿಡುತ್ತೇನೆ    ಸಿದ್ದರಾಮಯ್ಯ
Advertisement

ದಾವಣಗೆರೆ: ರಾಜ್ಯಕ್ಕೆ ಬರಬೇಕಾದ ಕೇಂದ್ರದ ತೆರಿಗೆ ಬಾಕಿ ವಿಚಾರವಾಗಿ ನಾನು ಸುಳ್ಳು ಹೇಳುತ್ತೇನೆ ಎನ್ನುವುದಾದರೆ ರಾಜಕೀಯ ಬಿಟ್ಟು ಬಿಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ನವರು ಪ್ರತಿಭಟನೆ ಮಾಡಿ ರಾಜ್ಯದ ಮಾನ ತೆಗೆದಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಕುಕನ್ನಡಿಗರಿಗೆ ಅನ್ಯಾಯ ಆದರೆ ಪ್ರತಿಭಟನೆ ಮಾಡಬಾರದಾ? ಯಡಿಯೂರಪ್ಪ ಬಾಯಿ ಮುಚ್ಚಿಕೊಂಡು ತಲೆ ಅಲ್ಲಾಡಿಸುತ್ತಾರೆಂದರೆ ನಾನೂ ಅಲ್ಲಾಡಿಸಬೇಕಾ?” ಎಂದು ಪ್ರಶ್ನಿಸಿದ್ದಾರೆ.

ಇನ್ನು ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆಯನ್ನು ಕೇಂದ್ರಕ್ಕೆ ಕೊಡುತ್ತೇವೆ. ನಮಗೆ ಬರುವುದು 50, 207 ಕೋಟಿ ಮಾತ್ರ. ಇನ್ನುಳಿದಿದ್ದನ್ನು ಕೇಂದ್ರ ಇಟ್ಟುಕೊಳ್ಳುತ್ತದೆ. ನಮ್ಮಿಂದ ನೂರು ರೂಪಾಯಿ ತೆರಿಗೆ ಸಂಗ್ರಹಿಸಿದರೆ ನಮಗೆ ಬರುವುದು 12ರಿಂದ 13 ರೂಪಾಯಿ ಮಾತ್ರ ಬರುತ್ತದೆ. ಅತಿಹೆಚ್ಚು ತರಿಗೆ ಸಂಗ್ರಹಿಸುವ ದೇಶದ ಎರಡನೇ ರಾಜ್ಯ ನಮ್ಮದು. ಅನ್ಯಾಯವಾದರೆ ಸುಮ್ಮನಿರಬೇಕಾ? ಎಂದು ವಾಗ್ದಾಳಿ ನಡೆಸಿದ್ದಾರೆ.

Advertisement

Author Image

Advertisement