For the best experience, open
https://m.bcsuddi.com
on your mobile browser.
Advertisement

'ನಿಖಿಲ್‌ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ಲುತ್ತಾರೆ, ಮೋದಿ ಅರ್ಶೀವಾದವಿದೆ' - ಯಡಿಯೂರಪ್ಪ

06:10 PM Oct 24, 2024 IST | BC Suddi
 ನಿಖಿಲ್‌ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ಲುತ್ತಾರೆ  ಮೋದಿ ಅರ್ಶೀವಾದವಿದೆ    ಯಡಿಯೂರಪ್ಪ
Advertisement

ಬೆಂಗಳೂರು : ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಂತಾ ಘೋಷಣೆ ಮಾಡಿದ್ದೇವೆ. ಅವರ ಮೇಲೆ ಮೋದಿ ಆಶೀರ್ವಾದ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಯಡಿಯೂರಪ್ಪ ಘೋಷಿಸಿದರು. ಬಳಿಕ ನಿಖಿಲ್‌ಗೆ ಹೂಗುಚ್ಛ ನೀಡಿ ನೀಡಿದರು.ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್‌ಗೆ ಯಡಿಯೂರಪ್ಪ ಹಾಕಿದರು. ಹೂವಿನ ಹಾರ ಹಾಕಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಬಿಎಸ್‌ವೈ, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಅಂತಾ ಘೋಷಣೆ ಮಾಡಿದ್ದೇವೆ. ಮೋದಿ ಆಶೀರ್ವಾದ ಇದೆ. ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ತಾರೆ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ, ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.

Advertisement

ನಾವೆಲ್ಲ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಗೆಲ್ಲುತ್ತೇವೆ. ದೊಡ್ಡ ಅಂತರದಲ್ಲಿ ನಿಖಿಲ್ ಗೆಲ್ತಾರೆ. ಯೋಗೇಶ್ವರ್ ಬಗ್ಗೆ ನಾನು ಮಾತಾಡೊಲ್ಲ. ನಿಖಿಲ್‌ಗೆ ನಾವು ಬೆಂಬಲ ಕೊಡ್ತೀವಿ ಎಂದು ತಿಳಿಸಿದರು.

Author Image

Advertisement