ನೀಟ್ ಪರೀಕ್ಷೆ ಹಿಂದಿನ ದಿನ ನನಗೆ ಪ್ರಶ್ನೆ ಪತ್ರಿಕೆ ಸಿಕ್ಕಿತ್ತು- ತಪ್ಪೊಪ್ಪಿಕೊಂಡ ಬಂಧಿತ ವಿದ್ಯಾರ್ಥಿ
04:31 PM Jun 20, 2024 IST | Bcsuddi
Advertisement
ಪಾಟ್ನಾ:ನೀಟ್ ಪರೀಕ್ಷೆ ಹಿಂದಿನ ದಿನ ಪ್ರಶ್ನೆಪತ್ರಿಕೆ ಪಡೆದುಕೊಂಡಿದ್ದೆ ಎಂದು ಬಂಧಿತ ವಿದ್ಯಾರ್ಥಿಯೊಬ್ಬ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಬಿಹಾರದಿಂದ ಬಂಧಿಸಲ್ಪಟ್ಟ ನಾಲ್ವರಲ್ಲಿ ಅನುರಾಗ್ ಯಾದವ್, ಸಿಕಂದರ್ ಯಾದವೆಂದು ಇಬ್ಬರೂ ದಾನಪುರ ಪುರಸಭೆಯ ಜೂನಿಯರ್ ಇಂಜಿನಿಯರ್ ಕಾಲೇಜಿನವರು. ನಿತೀಶ್ ಕುಮಾರ್ ಮತ್ತು ಅಮಿತ್ ಆನಂದ್ ಇವರನ್ನು ಕೂಡ ಬಂಧಿಸಲಾಗಿದೆ.
ಪರೀಕ್ಷೆಯ ಹಿಂದಿನ ದಿನ ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿದ್ದೆವು. ಬಿಹಾರ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಮರುದಿನ ಪರೀಕ್ಷೆಯಲ್ಲಿ ನಿಖರವಾದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ಇತರ ಇಬ್ಬರು ಆರೋಪಿಗಳಾದ ನಿತೀಶ್ ಕುಮಾರ್ ಮತ್ತು ಅಮಿತ್ ಆನಂದ್ ಅವರು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಬಹುದು. ನೀಟ್ ತೇರ್ಗಡೆಯಾಗಲು ಪ್ರತಿಯೊಬ್ಬ ಆಕಾಂಕ್ಷಿಗೆ 30-32 ಲಕ್ಷ ರೂ. ವೆಚ್ಚವಾಗುತ್ತದೆ ಅಂತಾ ಹೇಳಿದ್ದರು ಎಂದು ಯಾದವೆಂದು ಹೇಳಿದ್ದಾರೆ.