For the best experience, open
https://m.bcsuddi.com
on your mobile browser.
Advertisement

ನೀತಿ ಸಂಹಿತೆ ಉಲ್ಲಂಘನೆ: ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌ ಜಾರಿ

04:40 PM Apr 05, 2024 IST | Bcsuddi
ನೀತಿ ಸಂಹಿತೆ ಉಲ್ಲಂಘನೆ  ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌ ಜಾರಿ
Advertisement

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.ಕೋಟಾ ಶ್ರೀನಿವಾಸ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ 30 ರಂದು ಕಠಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್‌ ಸಮನ್ಸ್‌ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕೋರ್ಟ್  ಆದೇಶ ಹೊರಡಿಸಿದೆ.

Advertisement
Author Image

Advertisement