ನೀತಿ ಸಂಹಿತೆ ಉಲ್ಲಂಘನೆ - ಯತ್ನಾಳ್ ವಿಚಾರಣೆಗೆ ಹೈಕೋರ್ಟ್ ತಡೆ
10:11 AM Jan 14, 2024 IST
|
Bcsuddi
Advertisement
ಬೆಂಗಳೂರು: ವಿಧಾನಸಭೆ ಚುನಾವಣೆಯ ಸಂಧರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ವರದಿ ತಿಳಿಸಿದೆ.
Advertisement
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ಇನ್ನು ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಪೀಠವು ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.
Next Article