'ಪಕ್ಷ ಸೂಚಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ದ' - ಬಿ.ಸಿ.ಪಾಟೀಲ್
03:41 PM Jan 29, 2024 IST
|
Bcsuddi
Advertisement
ಹಾವೇರಿ: ಲೋಕಸಭೆ ಅಭ್ಯರ್ಥಿ ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷ ಸೂಚಿಸಿದರೆ ಲೋಕಸಭೆ ಸ್ಪರ್ಧೆಗೆ ಸಿದ್ದ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ಏನಾದರು ನೀನು ನಿಲ್ಲಪ್ಪ ಎಂದು ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ. ಈಗಾಗಲೇ ಹೈಕಮಾಂಡ್ ನವರು ಸರ್ವೆ ರಿಪೋರ್ಟ್ ನೋಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ ಎಂದರು.
ಇನ್ನು ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶೆಟ್ಟರ್ ಮರಳಿ ಮನೆಗೆ ಬಂದಿದ್ದಾರೆ. ರಾಹುಕಾಲ, ಗುಳಿಗಕಾಲ ಎಂದಿರುತ್ತದಲ್ಲ, ಹಾಗೆ ಕಾಲ ಕೆಟ್ಟಿದ್ದರಿಂದ ಅದೇನೋ ಆಯ್ತು. ಅವರಿಗೂ ಕೂಡಾ ಅನ್ಯಾಯವಾಗಿತ್ತು ಎಂದು ಹೇಳಿದ್ದಾರೆ.
Next Article