ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪತ್ನಿಯನ್ನು ಕೊಂದು ಅಪಘಾತ ಎಂದು ಬಿಂಬಿಸಲು ಯತ್ನ : ಆರೋಪಿಯ​ ಬಂಧನ

12:35 PM Jan 21, 2024 IST | Bcsuddi
Advertisement

ಗೋವಾ: ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ತನ್ನ ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಯನ್ನು ಗೌರವ್ ಕಟಿಯಾರ್ ಎಂದು ಗುರುತಿಸಿದ್ದು ತನ್ನ ಪತ್ನಿ ದೀಕ್ಷಾ ಗಂಗ್ವಾರ್ (27)ಅವರನ್ನು ಕೊಲೆಗೈದಿದ್ದಾನೆ.

ಜ 19 ರಂದು ಪೊಲೀಸರು ಗಂಗ್ವಾರ್ ಮಹಿಳೆಯ ಶವವನ್ನು ಗೋವಾದ ಬೀಚ್ ಬಳಿ ಪತ್ತೆ ಮಾಡಿದ್ದಾರೆ. ಆರೋಪಿಯು ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧಹೊಂದಿದ್ದರು, ಅವರಿಬ್ಬರ ನಡುವೆ ಈಕೆ ಅಡ್ಡಬರುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ.

ಗೌರವ್ ಕಟಿಯಾರ್ ಅವರು ದಕ್ಷಿಣ ಗೋವಾದ ಕೊಲ್ವಾದಲ್ಲಿ ಮ್ಯಾರಿಯಟ್ ಇಂಟರ್ನ್ಯಾಷನಲ್ ನಿರ್ವಹಿಸುತ್ತಿರುವ ಐಷಾರಾಮಿ ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾನೆ. ಲಕ್ನೋ ಮೂಲದ ಗೌರವ್ ಕಟಿಯಾರ್ ಸುಮಾರು ಒಂದು ವರ್ಷದ ಹಿಂದೆ ದೀಕ್ಷಾ ಗಂಗ್ವಾರ್ ಅವರನ್ನು ವಿವಾಹವಾದರು,

ಆದರೆ ಇವನ ಅನೈತಿಕ ಸಂಬಂಧದಿಂದ ತನ್ನ ಪತ್ನಿಗೆ ತಿಳಿದಿರುವುದರಿಂದ ಕೊಲ್ಲಲು ನಿರ್ಧರಿಸಿದ್ದ. ಗೌರವ್ ತನ್ನ ಪತ್ನಿಯನ್ನು ದಕ್ಷಿಣ ಗೋವಾದ ಕಡಲತೀರಕ್ಕೆ ವಿಹಾರಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ಎಂಬ ಮಾಹಿತಿ ದೊರೆತಿದೆ.

ಗೌರವ್ ಮತ್ತು ದೀಕ್ಷಾ ನೀರಿಗೆ ಹೋಗಿದ್ದು ಬಳಿಕ ಬೀಚ್​ನಿಂದ ಆತ ಒಬ್ಬನೇ ಬರುತ್ತಿರುವುದನ್ನು ಕಂಡ ಕೆಲ ಪ್ರವಾಸಿಗರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೇಹದಲ್ಲಿ ಗಾಯದ ಗುರುತುಗಳಿದ್ದು. ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Next Article