For the best experience, open
https://m.bcsuddi.com
on your mobile browser.
Advertisement

ಪದ್ಮಶ್ರೀ ತುಳಸಿ ಗೌಡ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

01:23 PM Apr 23, 2024 IST | Bcsuddi
ಪದ್ಮಶ್ರೀ ತುಳಸಿ ಗೌಡ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು
Advertisement

ಕಾರವಾರ : ತುಳಸಿ‌ ಗೌಡ ಅವರು ಸೋಮವಾರ ಆಕಸ್ಮಿಕವಾಗಿ ಅನಾರೋಗ್ಯಕ್ಕೊಳಗಾಗಿದ್ದು, ತೀರ ಆರೋಗ್ಯ ಹದಗೆಟ್ಟು ಅಸ್ವಸ್ಥರಾಗಿದ್ದರು. ಸೋಮವಾರ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಜನಶಕ್ತಿ ವೇದಿಕೆಯ ಮಾಧವ ನಾಯಕ, ಅವರನ್ನು ಜಿಲ್ಲಾ ಆಸ್ಪತ್ರೆ ಐಸಿಯು ನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಶಾಸಕ ಸತೀಶ್ ಸೈಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಕೂಡ ವಿಷಯ ತಿಳಿದು ತುಳಸಿ ಗೌಡರ ಆರೋಗ್ಯ ವಿಚಾರಿಸಿದ್ದು, ವೈದ್ಯರಿಂದ ಮಾಹಿತಿ ಪಡೆದು ಉತ್ತಮ ವೈದ್ಯಕೀಯ ಔಷಧೋಪಚಾರ ನೀಡುವಂತೆ ಸೂಚಿಸಿದ್ದಾರೆ.

Author Image

Advertisement