For the best experience, open
https://m.bcsuddi.com
on your mobile browser.
Advertisement

ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದ ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಆರೋಪಿ

02:02 PM Jul 14, 2024 IST | Bcsuddi
ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದ ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಆರೋಪಿ
Advertisement

ಚೆನ್ನೈ: ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ನಿನ್ನೆ ಸಂಜೆ ಚೆನ್ನೈನ ಮಾಧವರಂ ಬಳಿ ಪೊಲೀಸರು ನಡೆಸಿದ ಎನ್‌ಕೌಂಟರ್‌ಗೆ ಶನಿವಾರ ಬಲಿಯಾಗಿದ್ದಾನೆ.

ತಿರುವೆಂಗಡಂ ಎಂಬ ಆರೋಪಿ ಪೊಲೀಸರ ಎನ್‌ಕೌಂಟರ್ ನಲ್ಲಿ ಸಾವನ್ನಪ್ಪಿದವ.

ಜು.11 ರಂದು 5 ದಿನಗಳ ಕಾಲ ಆರೋಪಿಯನ್ನು ಸೆಂಬಿಯಂ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು. ವಿಚಾರಣೆಗೆಂದು ಆರೋಪಿಯನ್ನು ಪರಂಗಿಮಲೈ ಸಶಸ್ತ್ರ ಮೀಸಲು ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಆರೋಪಿಯು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದು, ಆಗ ಪೊಲೀಸರು ಆತನ ಮೇಲೆ ಎನ್‌ಕೌಂಟರ್ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ

Advertisement

Author Image

Advertisement