ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರಜ್ವಲ್ ರೇವಣ್ಣನನ್ನು ಪ್ಲಾನ್ ಮಾಡಿ ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ- ಸಿಎಂ ಅಚ್ಚರಿ ಹೇಳಿಕೆ

06:02 PM May 01, 2024 IST | Bcsuddi
Advertisement

ಯಾದಗಿರಿ: ದೇವೇಗೌಡ ಅವರೇ ಪ್ಲಾನ್ ಮಾಡಿ ಪ್ರಜ್ವಲ್ ಅನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದಾರೆ.

Advertisement

ಪ್ರಜ್ವಲ್ ರೇವಣ್ಣ ವೀಡಿಯೋ ವೈರಲ್ ಬಳಿಕ ವಿದೇಶಕ್ಕೆ ಹಾರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ಸಿ.ಡಿ ಕೇಸ್‌ಗೂ ಡಿಸಿಎಂ ಡಿಕೆ ಶಿವಕುಮಾರ್‌ಗೂ ಸಂಬಂಧವಿಲ್ಲ. ಸೂರಜ್ ರೇವಣ್ಣ ಜೊತೆ ಪೋಟೋ ಇರೋದಕ್ಕೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಪೋಟೋ ಇದೆ. ಹಾಗಾದ್ರೆ ನಂದು ರೇವಣ್ಣನ ಜೊತೆ ಪೋಟೋ ಇದ್ದರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥನಾ ಎಂದು ಪ್ರಶ್ನಿಸಿದರು.

ಪೆನ್‌ಡ್ರೈವ್ ಹಿಂದೆ ಡಿಕೆಶಿ ಕೈವಾಡ ಇದೆ ಎನ್ನುವ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾರ್ತಿಕ್ ಯಾರ ಡ್ರೈವರ್? ಪ್ರಜ್ವಲ್ ಡ್ರೈವರ್. ಪೆನ್‌ಡ್ರೈವ್ ಬಿಜೆಪಿ ಮುಖಂಡನ ಕೈಯಲ್ಲಿ ಕೊಟ್ಟಿದ್ದು. ಕುಮಾರಸ್ವಾಮಿ ರಾಜಕೀಯವಾಗಿ ಡಿಕೆಶಿ ಮೇಲೆ ಆರೋಪ ಮಾಡುತ್ತಾರೆ. ಅಮಿತ್ ಶಾ ಅವರಿಗೆ ಗೊತ್ತಿದ್ದರೂ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ಗೆ ಟಿಕೆಟ್ ಯಾಕೆ ಕೊಟ್ಟರು? ಸೆಕ್ಸ್ ಸ್ಕ್ಯಾಂಡಲ್‌ನಲ್ಲಿ ಸಿಲುಕಿಕೊಂಡವನಿಗೆ ಯಾಕೆ ಟಿಕೆಟ್ ಕೊಟ್ಟರು? ಎಸ್‌ಐಟಿಯಿಂದ ಪಾರದರ್ಶಕವಾಗಿ ತನಿಖೆ ಆಗುತ್ತೆ ಎಂದರು.

Advertisement
Next Article