ಪ್ರತಿಮಾ ಕೊಲೆ ಪ್ರಕರಣ: ನ.15ರವರೆಗೆ ಆರೋಪಿ ಕಿರಣ್ ಪೊಲೀಸ್ ಕಸ್ಟಡಿಗೆ
06:40 PM Nov 06, 2023 IST | Bcsuddi
Advertisement
ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಆರೋಪಿ ಕಿರಣ್ನನ್ನು ನ.15ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 2ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.ಪ್ರತಿಮಾ ಅವರ ಕಾರು ಡ್ರೈವರ್ ಆಗಿದ್ದ ಕಿರಣ್ನನ್ನು ಅನುಮಾನದ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಆರೋಪಿ ಕಿರಣ್ , ಹತ್ಯೆ ಮಾಡಿರುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಸ್ಪಷ್ಟನೆ ನೀಡಿದ್ದರು. ಹೀಗಾಗಿ ಹೆಚ್ಚಿನ ವಿಚಾರನೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.