For the best experience, open
https://m.bcsuddi.com
on your mobile browser.
Advertisement

ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಅಂತ ಖರ್ಗೆ ಹೇಳಿದ್ದು ಏಕೆ.?

04:50 PM Apr 24, 2024 IST | Bcsuddi
ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಅಂತ ಖರ್ಗೆ ಹೇಳಿದ್ದು ಏಕೆ
Advertisement

ಕಲಬುರಗಿ:ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅಫಜಲಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಬುಧವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.

Advertisement

ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಯಾವ ಮಹಿಳೆಯ ಮಾಂಗಲ್ಯ ಸೂತ್ರ ಕಿತ್ತುಕೊಂಡಿದೆ? ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ ಎಂದರು.

ಸಿಕ್ಕ ಅಧಿಕಾರವನ್ನು ಜನರ ಹಿತಕ್ಕಾಗಿ ಬಳಸಿಕೊಳ್ಳಬೇಕು. ಆದರೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿಕೊಂಡು ದೇಶವನ್ನು ಮಾರುತ್ತಿದ್ದಾರೆ. ಅತ್ತ ಅಂಬಾನಿ ಮತ್ತು ಅದಾನಿ ಇಬ್ಬರೂ ಖರೀದಿ ಮಾಡುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags :
Author Image

Advertisement