For the best experience, open
https://m.bcsuddi.com
on your mobile browser.
Advertisement

ಪ್ರಧಾನಿ ಮೋದಿಯ ಕೈ ಬಲಪಡಿಸಬೇಕು - ಹೆಚ್ ಡಿ ದೇವೇಗೌಡ ಕರೆ

06:16 PM Dec 01, 2023 IST | Bcsuddi
ಪ್ರಧಾನಿ ಮೋದಿಯ ಕೈ ಬಲಪಡಿಸಬೇಕು   ಹೆಚ್ ಡಿ ದೇವೇಗೌಡ ಕರೆ
Advertisement

ಹಾಸನ: ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿ ಪಕ್ಷವನ್ನು ಎದುರಿಸಿದ್ದೆವು. ಆದರೆ ಈಗ ಅದೆಲ್ಲವನ್ನೂ ಮರೆತು ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕು. ನಮ್ಮ ಪಕ್ಷ ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ಅನ್ನು ಎದುರಿಸಲು ತೀರ್ಮಾನಿಸಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದ್ದು, ಒಂದೆರಡು ಕಡೆಯಲ್ಲಿ ಕಾಂಗ್ರೆಸ್, ಒಂದೆರಡು ಕಡೆಯಲ್ಲಿ ಬಿಜೆಪಿ ಎಂದು ಸಮೀಕ್ಷೆಯ ವರದಿ ತಿಳಿಸಿದೆ. ವಿಧಾನಸಭಾ ಚುನಾವಣೆಯು ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವುದು ಎಂದರು.

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅನ್ನು ಗ್ಯಾರೆಂಟಿ ಯೋಜನೆಯು ಕೈ ಹಿಡಿಯಿತು. ಸದ್ಯ ದೇಶದೆಲ್ಲೆಡೆ ಗ್ಯಾರೆಂಟಿ ಯೋಜನೆ ಪ್ರಾರಂಭವಾಗಿದೆ. ನನಗೆ ರಾಜ್ಯಸಭೆಯ ಸದಸ್ಯನಾಗಿ ಇನ್ನೂ ಎರಡುವರೆ ವರ್ಷಗಳ ಕಾಲ ಅವಕಾಶವಿದೆ. ಲೋಕಸಭೆ ಚುನಾವಣೆ ವೇಳೆ ಹೆಚ್​ಡಿ ಕುಮಾರಸ್ವಾಮಿ ಕೂಡ ಆಗಮಿಸುತ್ತಾರೆ. ಇನ್ನು ಮುಂಬರುವ ಲೋಕಸಭೆಯಲ್ಲಿ ನಮಗೆ ಹಂಚಿಕೆಯಾಗಲಿರುವ ಸೀಟುಗಳ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷರು, ಹೆಚ್​ಡಿಕೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ದೇವೇಗೌಡ ಅವರು ತಿಳಿಸಿದ್ದಾರೆ.

Advertisement

Author Image

Advertisement