ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರೇಯಸಿಯನ್ನ ನೋಡಲು ಬೆಂಗಳೂರಿಗೆ ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್

01:43 PM Sep 06, 2024 IST | BC Suddi
Advertisement

ಬೆಂಗಳೂರು: ಪ್ರೇಯಸಿನ್ನು ನೋಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣ ಮೂಲದ ನಕ್ಸಲ್‌ವೊಬ್ಬನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್.

ಅನಿರುದ್ದ್ ಸಿಪಿಐ ಮಾವೋವಾದಿಗಳ ಪರವಾಗಿ ಕೆಲಸ ಮಾಡುತ್ತಿದ್ದ. ಆತ ನಿಷೇಧಿತ ಬರಹಗಳನ್ನು ಸರ್ಕ್ಯೂಲೇಟ್ ಮಾಡುತ್ತಿದ್ದ. ಈವರೆಗೆ ಯಾವ ಪೊಲೀಸರಿಗೂ ಸಿಕ್ಕಿ ಬೀಳದ ಈತ ಇದೀಗ ಅಂದರ್ ಆಗಿದ್ದಾನೆ. ಈ ಬಗ್ಗೆ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಷೇಧಿತ ನಕ್ಸಲ್ ಸಂಘಟನೆಯಾಗಿರುವ ಸಿಪಿಐ(ಎಂ)ನಲ್ಲಿ ಅನಿರುದ್ಧ್ ತೊಡಗಿದ್ದ. ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಹಣ ಸಂಗ್ರಹ, ಗುಪ್ತ ಸಭೆಗಳನ್ನು ನಡೆಸುತ್ತಿದ್ದ. ತನ್ನ ಗೆಳತಿ ನೋಡಲು ಮೂರ್ನಾಲ್ಕು ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಆತ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ ಎನ್ನಲಾಗಿದೆ.

ಸದ್ಯ ಬಂಧಿತ ನಕ್ಸಲ್‌ನಿಂದ ಎರಡು ಬ್ಯಾಗ್‌ಗಳು, ಪೆನ್ ಡ್ರೈವ್‌ಗಳು, ಟ್ಯಾಬ್ ವಶಕ್ಕೆ ಪಡೆಯಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ 8 ಗಂಟೆಗೆ ಚೆನ್ನೈಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ. ಈ ಸಂದರ್ಭ ಅನಿರುದ್ದನ ಮೇಲೆ ನಿಗಾ ಇಟ್ಟಿದ್ದ ಎಟಿಸಿ ತಂಡ ಆತನನ್ನು ಬಂಧಿಸಿ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಸದ್ಯ ಆರೋಪಿಯನ್ನು ಕಸ್ಟಡಿಗೆ ಪಡೆದು ಮುಂದಿನ ವಿಚಾರಣೆ ನಡೆಸಲಾಗುತ್ತಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Advertisement
Next Article