ಫಲಿಂತಾಶಕ್ಕೂ ಮೊದಲೇ 3 ಕ್ಷೇತ್ರ ಗೆದ್ದ ಬಿಜೆಪಿ..!
09:05 AM May 06, 2024 IST | Bcsuddi
Advertisement
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಅದು ಪ್ರಧಾನ ಮಂತ್ರಿ ನರೇಂದ್ರ ಮೋದಿಯ ತವರು ರಾಜ್ಯ ಗುಜರಾತ್ನಿಂದಲೇ ಆರಂಭವಾಗಿದೆ.
ಸೂರತ್ನಲ್ಲಿ ಅಭ್ಯರ್ಥಿ ನಾಮಪತ್ರ ತಿರಸ್ಕಾರವಾದ ಕಾರಣ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಇದು ಫಲಿತಾಂಶಕ್ಕೂ ಮುನ್ನ ಬಿಜೆಪಿಗೆ ಬಹುದೊಡ್ಡ ಬೂಸ್ಟರ್ ಸಿಕ್ಕಂತಾಗಿದೆ. ಅದರಂತೆ, ಮಧ್ಯಪ್ರದೇಶ, ಒಡಿಶಾ, ರಾಜ್ಯಕ್ಕೂ ಗೆಲುವಿನ ಯಾನ ಹಬ್ಬಿದೆ.
ಇಂದೋರ್ ಮತ್ತು ಒಡಿಶಾದ ಪುರಿ ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರ ಹೈವೊಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿತ್ತು. ಆದ್ರೆ ಆ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರಕ್ಕೆ ದುಡ್ಡಿಲ್ಲ ಎಂದು ಹೇಳಿ ನಾಮಪತ್ರ ಹಿಂಪಡೆದಿದ್ದಾರೆ.
Advertisement
ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧಿಡೀರನೇ ನಾಮಪತ್ರ ಹಿಂಪಡೆದು ಕೈ ಹೈಕಮಾಂಡ್ಗೆ ಶಾಕ್ ಕೊಟ್ಟಿದ್ದಾರೆ.