ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷ' - ಕಾಂಗ್ರೆಸ್ ಲೇವಡಿ

09:01 AM Nov 17, 2023 IST | Bcsuddi
Advertisement

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿಕೆ ಹಾಗೂ ಕಾಂಗ್ರೆಸ್ ನಡುವೆ ವಾಗ್ದಾಳಿಗಳು ಮುಂದುವರಿದಿದ್ದು "ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ" ಎಂದು ಕರ್ನಾಟಕ ಕಾಂಗ್ರೆಸ್ ಘಟಕ ಲೇವಡಿ ಮಾಡಿದೆ.

Advertisement

ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, "ಜೆಡಿಎಸ್ ಪಕ್ಷದ ಶಾಸಕರು ಹಣ ಕೊಟ್ಟು ಮತ ಪಡೆದಿದ್ದಾರೆ, ಹಣ ಪಡೆದು ಮತ ನೀಡುತ್ತಾರೆ, ಕುಮಾರಸ್ವಾಮಿಯವರು ಹಣ ವಸೂಲಿ ಮಾಡಿ ಟಿಕೆಟ್ ನೀಡುತ್ತಾರೆ. ಇದನ್ನು ಅವರೇ ಒಪ್ಪಿಕೊಂಡಿದ್ದು. ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷಕ್ಕಾಗಿ ಪಡೆದ ಹಣ ಕುಮಾರಸ್ವಾಮಿಯವರ ಜೇಬಿಗೆ ಹೋಗುತ್ತದೆಯಲ್ಲವೇ" ಎಂದು ಹೇಳಿದೆ.

ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಟಿಕೆಟ್ ಅಕ್ಷಾಂಕ್ಷಿಗಳಲ್ಲೇ ಸೂಟ್ ಕೇಸ್ ಪಡೆದ ತಾವು ಅಧಿಕಾರದಲ್ಲಿ ಕಂಟೈನರ್ ನಲ್ಲಿ ವಸೂಲಿ ಮಾಡಿಲ್ಲವೇ? ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

Advertisement
Next Article