ಬಾಲಕಿಯ ರುಂಡ ಕಡಿದ ಪ್ರಕರಣ | ವಿಶೇಷ ನ್ಯಾಯಾಲಯ ಸ್ಥಾಪನೆ: ಪರಮೇಶ್ವರ್
05:52 PM May 16, 2024 IST | Bcsuddi
Advertisement
ಮಡಿಕೇರಿ: ಬಾಲಕಿಯ ರುಂಡ ಕಡಿದ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಕೊಲೆಯಾದ ಬಾಲಕಿಯ ಮನೆಗೆ ಗುರುವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇದೊಂದು ಭೀಕರವಾದ ಘಟನೆ. ಮನುಷ್ಯರು ಯಾರೂ ಒಪ್ಪದಂತಹ ಘಟನೆ. ಇಂತಹ ಘಟನೆ ನಡೆಯಬಾರದಿತ್ತು. ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳನ್ನು ನೇಮಕ ಮಾಡಲಾಗುವುದು ಎಂದರು.
Advertisement