-ಬಾಹೂರ ಬೊಮ್ಮಣ್ಣ ಅವರ ವಚನ ……
06:54 AM Apr 09, 2024 IST
|
Bcsuddi
Advertisement
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಹಿಂದಣ ಸುಖ, ಮುಂದಣ ದುಃಖಂಗಳು
ಮುಂದಣ ಸುಖ, ಹಿಂದಣ ದುಃಖಂಗಳು
ಇವ ತಾ ಸಂಧಿಸಿ ಅನುಭವಿಸಿದಲ್ಲಿ
ಸಂಚಿತ ಪ್ರಾರಬ್ಧ ಆಗಾಮಿಗಳೆಂದು
ಅಲ್ಲಿಯಲ್ಲಿ ಸಂಕಲ್ಪಿಸಿ ಕೇಳಲೇತಕ್ಕೆ?
ಹಿಂದೆ ಅಳಿದವರ ಕೇಳಿ, ಮುಂದೆ ಸಾವವರ ಕಂಡು
ಅಂದಂದಿಗೆ ನೂರು ತುಂಬಿತ್ತೆಂದು
ಸಂದೇಹ ನಿವೃತ್ತಿಯಾಗಿರಬೇಕು,
ಸಂಗನಬಸವಣ್ಣ ಸಾಕ್ಷಿಯಾಗಿಬ್ರಹ್ಮೇಶ್ವರಲಿಂಗವನರಿವುದಕ್ಕೆ.
-ಬಾಹೂರ ಬೊಮ್ಮಣ್ಣ
Next Article