For the best experience, open
https://m.bcsuddi.com
on your mobile browser.
Advertisement

ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಾವು

11:27 AM Mar 14, 2024 IST | Bcsuddi
ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತ ಪ್ರಕರಣ  ಚಿಕಿತ್ಸೆ ಫಲಿಸದೇ ಆಟೋ ಚಾಲಕ ಸಾವು
Advertisement

ಕುಣಿಗಲ್: ಕನ್ನಡ ಬಿಗ್ ಬಾಸ್ 10ರ ಸ್ಪರ್ಧಿ ತುಕಾಲಿ ಸಂತೋಷ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ.

ಜಗದೀಶ್ (44) ಮೃತ ದುರ್ದೈವಿ. ಈತ ಕುಣಿಗಲ್ ತಾಲ್ಲೂಕಿನ ಕೋಡಿಹಳ್ಳಿ ಪಾಳ್ಯದ ನಿವಾಸಿ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಬುಧವಾರ ರಾತ್ರಿ ಹೊನ್ನೆನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರು ಹಾಗೂ ಆಟೋ ನಡುವೆ ಅಪಘಾತ ನಡೆದಿತ್ತು. ಜಗದೀಶ್​ಗೆ ಗಾಯವಾಗಿತ್ತು. ಕೂಡಲೇ ಆತನನ್ನು ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಜಗದೀಶ್ ಮೃತಪಟ್ಟಿದ್ದಾರೆ.

ಕುಣಿಗಲ್​ ಮಾರ್ಗವಾಗಿ ತುಕಾಲಿ ಸಂತೋಷ್​ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರದತ್ತ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್​​ ಕಡೆಯಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೋ, ತುಕಾಲಿ ಸಂತೋಷ್​ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.ಅಪಘಾತ ನಡೆದ ಸಂದರ್ಭ ಆಟೋ ಚಾಲಕ ಜಗದೀಶ್ ಮದ್ಯಪಾನ ಮಾಡಿದ್ದ ಎಂದು ಹೇಳಲಾಗಿದ್ದು, ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

Advertisement

ತುಕಾಲಿ ಸಂತೋಷ್​ ಅವರು ಕೆಲ ವಾರಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಟೋಸ್​ ಕಾರನ್ನು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದೆ.

Author Image

Advertisement