ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್

03:30 PM Apr 19, 2024 IST | Bcsuddi
Advertisement

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ಕೆಲವು ದಿನಗಳು ಉಳಿದಿದ್ದು, ಇದೇ ವೇಳೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹೆಚ್ಚು ಪ್ರಭಾವ ಹೊಂದಿರುವ ಮಾಜಿ ಸಚಿವ ಮತ್ತು ಕಲಬುರಗಿಯ ಪ್ರಭಾವಿ ನಾಯಕ ಮಾಲಿಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

Advertisement

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಮಾಲಿಕಯ್ಯ ಅವರು, 'ಬಿಜೆಪಿ ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ಬಹಳ ನೋವಿದೆ. ಹಿಂದುಳಿದ ವರ್ಗದವನನ್ನು ಹೇಗೆ ನಡೆಸಿಕೊಳ್ಳುತ್ತಾರೆಂಬ ಅನುಭವ ನನಗೆ ಆಗಿದೆ. ಎಂ.ವೈ.ಪಾಟೀಲ್ ಕೂಡ ಕಾಂಗ್ರೆಸ್ ಗೆ ಬರ ಮಾಡಿಕೊಂಡಿದ್ದಾರೆ' ಎಂದರು.

ನಂತರ ಮಾತನಾಡಿದ ಡಿಸಿಎಂ ಡಿಕೆಶಿ ಅವರು, 'ರಾಜ್ಯದ ಉದ್ದಗಲಕ್ಕೂ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದಾರೆ. ಬಿಜೆಪಿಯವರಿಗೆ ಧ್ವನಿ ಇಲ್ಲ, ಧ್ವನಿ ಕಳೆದುಕೊಂಡಿದ್ದಾರೆ. ‍ಷರತ್ತು ಇಲ್ಲದೆ ಪಕ್ಷಕ್ಕೆ ಬರುವವರಿಗೆ ನಮ್ಮ ಸ್ವಾಗತ. ಇನ್ನು ಜೆಡಿಎಸ್ ಸಿದ್ಧಾಂತ ಬದಲಾಗುತ್ತಿದೆ. ಹೀಗಾಗಿ ಹಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುತ್ತಿದ್ದಾರೆ' ಎಂದು ಹೇಳಿದರು.

Advertisement
Next Article