ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡ ಲಕ್ಷ್ಮಣ ಸವದಿ - ರಾಜಕೀಯ ವಲಯದಲ್ಲಿ ಚರ್ಚೆ
10:36 AM Jan 30, 2024 IST | Bcsuddi
Advertisement
ಬೆಳಗಾವಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುತ್ತಾರೆ ಎಂಬ ಚರ್ಚೆಗಳ ನಡುವೆ ಇದೀಗ ಸವದಿ ಅವರು ಬಿಜೆಪಿ ನಾಯಕರ ಜೊತೆಗೆ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ತಮ್ಮ ವಾಹನದಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಜತೆಗೆ ಸೋಮವಾರ ಡಿಸಿಸಿ ಬ್ಯಾಂಕ್ ಸಾಮಾನ್ಯ ಸಭೆಗೆ ಬಂದಿದ್ದ ಸವದಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಸವದಿಯವರನ್ನು ಬಿಜೆಪಿಗೆ ಕರೆತರಲು ಒಂದು ತಂಡ ಪ್ರಯತ್ನ ನಡೆಸಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ನನಗೆ ಏನೂ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
Advertisement