ಬಿಜೆಪಿ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಆದ್ರೆ ಮಾಡಿದ್ರ.?
04:16 PM Dec 15, 2023 IST | Bcsuddi
Advertisement
ಬೆಳಗಾವಿ: 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಯಾದ ಬಳಿಕವೂ ಮನ್ನಾ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲನ್ನು ಅವಧಿಯೊಳಗೆ ಪಾವತಿಸಿದರೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ನಡೆದ ಚರ್ಚೆಗೆ, ಶುಕ್ರವಾರ ಅವರು ಉತ್ತರ ನೀಡಿದರು. ಸಾಲದ ಮೇಲಿನ ಬಡ್ಡಿಮನ್ನಾ ಮಾಡುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ ಎಂದು ಹೇಳಿದರು.
Advertisement