For the best experience, open
https://m.bcsuddi.com
on your mobile browser.
Advertisement

ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ ಕೇಸ್ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಮೇಲೆ ಎಫ್‌ಐಆರ್ ದಾಖಲು

06:26 PM Dec 05, 2023 IST | Bcsuddi
ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ ಕೇಸ್   ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಮೇಲೆ ಎಫ್‌ಐಆರ್ ದಾಖಲು
Advertisement

ಬೆಳಗಾವಿ : ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಇಬ್ಬರು ಆಪ್ತರು, ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860(U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್ ಮತ್ತು ಐಪಿಸಿ ಸೆಕ್ಷನ್ 1989(u/s-3(1), (r)(s), 3(2)(v-a), IPC 1860(u/s-149ರಡಿ ಕೇಸ್ ದಾಖಲಾಗಿದೆ. ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಕೇಸ್ ದಾಖಲಾಗಿದೆ. ಪೃಥ್ವಿ ಸಿಂಗ ಮೇಲೆ ಸಚಿವೆ ಹೆಬ್ಬಾಳ್ಕರ್ ಸಹೋದರ ಎಂಎಲ್ ಸಿ ಚೆನ್ನರಾಜ್ ಹಟ್ಟಿಹೊಳಿ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದರು. ಹೀಗಾಗಿ, ಪೃಥ್ವಿ ಸಿಂಗ್ ಪುತ್ರ ಫುಪಿಂದರ್ ಸಿಂಗ್ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

Author Image

Advertisement