ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಜೆಪಿ ಮುಖಂಡರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ.!

07:43 AM Mar 01, 2024 IST | Bcsuddi
Advertisement

 

Advertisement

ಕಲಬುರಗಿ : ಬೆಳಗಿನ ಜಾವ ಮಾದನಹಿಪ್ಪರಗಾ ಪೊಲೀಸ್ ಠಾಣೆಯ ವ್ಯಾಪ್ತಿಯ ಸ್ವಗ್ರಾಮ ಸರಸಂಬಾದಲ್ಲಿಯೇ ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ಗುರುವಾರ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಗ್ಗೋಲೆ ಮಾಡಿದ್ದಾರೆ.!

ಕೊಲೆಯಾದ ಮಹಾಂತಪ್ಪ ಹೊಲಕ್ಕೆ ಹೋದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿ, ಕೊಲೆಮಾಡಿ ಪರಾರಿಯಾಗಿದ್ದಾರೆ. ರಾಡ್‌ನಿಂದ ದುಷ್ಕರ್ಮಿಗಳು ನಡೆಸಿದ ದಾಳಿಗೆ ತೀವ್ರಗಾಯಗೊಂಡಿದ್ದ ಆಲೂರೆ ಅವರನ್ನು ಆಳಂದನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಸೋಲ್ಲಾಪೂರದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ಹೇಳಲಾಗುತ್ತಿದೆ.

ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದು, ಘಟಕನೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆದಿದೆ. ಸರಸಂಬಾ ಗ್ರಾಮದ ಶ್ರೀ ಧನಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಸಹಕಾರಿ ಧುರೀಣ ಆಲೂರೆ ಅವರು 4 ಬಾರಿ ಸರಸಂಬಾ ಗ್ರಾ.ಪಂ.ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅವರು ಮುಂಬರುವ ಜಿಪಂ ಚುನಾವಣೆಯ ಸ್ಪರ್ಧಾ ಆಕಾಂಕ್ಷಿಯಾಗಿದ್ದು, ಸಿದ್ಧತೆ ಕೂಡಾ ನಡೆಸಿದ್ದರು. ಅವರ ಕೊಲೆಗೆ ರಾಜಕೀಯ ದ್ವೇಷವೇನಾರದೂ ಕಾರಣವೇ ಅಥವಾ ವೈಯಕ್ತಿಕ ವೈಷಮ್ಯವೇ ಎಂಬ ಶಂಕೆ ಜನರನ್ನು ಕಾಡುತ್ತಿದೆ

Tags :
ಬಿಜೆಪಿ ಮುಖಂಡರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ.!
Advertisement
Next Article