ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸುದ್ದಿಗೋಷ್ಠಿಗೂ ಮುನ್ನ ಪೊಲೀಸ್ ವಶಕ್ಕೆ
03:21 PM Dec 07, 2023 IST
|
Bcsuddi
Advertisement
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಅವರನ್ನು ನಗರದ ಚೌಕ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
ಶಹಾಬಾದ್ ಬಳಿ ತನ್ನ ಮೇಲೆ ಪ್ರೀಯಾಂಕ್ ಖರ್ಗೆ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಮಣಿಕಂಠ ರಾಥೋಡ್ ಆರೋಪಿಸಿದ್ದರು. ಆದರೆ ಇದೆಲ್ಲ ಕಟ್ಟುಕಥೆ, ಹಲ್ಲೆಯಾಗಿಲ್ಲ ಕಾರು ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಅನ್ನೋದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿತ್ತು.
ಪೊಲೀಸರು ನೀಡಿರುವ ಮಾಹಿತಿಯನ್ನು ಅಲ್ಲಗಳೆದಿದ್ದ ಮಣಿಕಂಠ ರಾಥೋಡ್, ಇಂದು ಸುದ್ದಿಗೋಷ್ಟಿ ನಡೆಸಲು ಮುಂದಾಗಿದ್ದರು. ಪೊಲೀಸರ ತನಿಖೆಯ ವರದಿ ಸುಳ್ಳು, ನನ್ನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಸಾಕ್ಷಿ ಬಿಡುಗಡೆ ಮಾಡ್ತೀನಿ ಎಂದು ಸುದ್ದಿಗೋಷ್ಠಿ ಕರೆದಿದ್ದರು. ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Next Article