ಬಿಜೆಪಿ: ವಿಧಾನಸಭೆ ಪ್ರತಿಪಕ್ಷ ಸ್ಥಾನ ಉತ್ತರ ಕರ್ನಾಟಕದವರಿಗೆ ಸಿಗಬೇಕಿತ್ತು.!
07:35 AM Nov 18, 2023 IST | Bcsuddi
Advertisement
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಾಗ ಉತ್ತರ ಕರ್ನಾಟಕ ಪ್ರದೇಶದವರಿಗೆ ಆದ್ಯತೆ ನೀಡಬೇಕಿತ್ತು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದರು.
ವಿಪಕ್ಷ ನಾಯಕನನ್ನಾಗಿ ಆರ್ ಅಶೋಕ ಅವರ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ ಬೆಲ್ಲದ, ಉತ್ತರ ಕರ್ನಾಟಕ ಭಾಗಕ್ಕೆ ಮಾನ್ಯತೆ ಸಿಗಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
Advertisement
ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರಿಬ್ಬರೂ ದಕ್ಷಿಣ ಕರ್ನಾಟಕದವರು. ಹೀಗಾಗಿ ಮೊದಲೇ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೆವು.
ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ನಾವು ಒಗ್ಗಟ್ಟಿನ ಕೆಲಸ ಮಾಡುತ್ತೇವೆ. ಮುಂದೆ ಗೆಲುವು ಸಾಧಿಸಿದರೆ ಅದು ವೈಯಕ್ತಿಕ ಗೆಲುವು ಆಗುವುದಿಲ್ಲ. ಅದು ಸಾಮೂಹಿಕ ಗೆಲುವು ಆಗುತ್ತದೆ ಎಂದು ಅರವಿಂದ ಬೆಲ್ಲದ್ ಹೇಳಿದ್ದಾರೆ.