ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಬಿಜೆಪಿ ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ?'- ರಾಜಣ್ಣ ಪ್ರಶ್ನೆ

10:49 AM Jan 14, 2024 IST | Bcsuddi
Advertisement

ನವದೆಹಲಿ: ಬಿಜೆಪಿ ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಅಥವಾ ಅವರಿಗೆ ಜಾಗೀರು ಕೊಟ್ಟಿದ್ದೀವಾ? ನಾವು ಹಿಂದೂಗಳು ಅಲ್ಲದೇ ಇನ್ನೇನು? ಎಂದು ಸಚಿವ ಕೆ.ಎನ್.ರಾಜಣ್ಣ ಪ್ರಶ್ನಿಸಿದ್ದಾರೆ.

Advertisement

ಸಿ ಎಂ ಸಿದ್ದರಾಮಯ್ಯ ಅವರ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡುವ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜ. 22 ರ ನಂತರ ರಾಮಮಂದಿರಕ್ಕೆ ಭೇಟಿ ನೀಡುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಸರಿಯಾಗಿದೆ. ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರೆ ತಪ್ಪೇನು? ರಾಮಮಂದಿರ ಬಿಜೆಪಿ ನಾಯಕರ ಸ್ವತ್ತೆ? ಈ ಹಿಂದೆ ಹೇಳಿರುವುದೂ ಸರಿ ಇದೆ. ಈಗ ಹೇಳುವುದು ಕೂಡ ಸರಿಯಾಗಿಯೇ ಇದೆ ಎಂದು ಸಿದ್ದಯಾಮಯ್ಯ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡರು.

ಮತಕ್ಕಾಗಿ ಬಿಜೆಪಿ ಪದೇ ಪದೆ ಹಿಂದೂ ಹಿಂದೂ ಎಂದು ಹೇಳುತ್ತದೆ. ಅಂಬೇಡ್ಕರ್ ತಾನು ಹಿಂದೂವಾಗಿ ಸಾಯುವುದಿಲ್ಲ ಎಂದು ಹೇಳಿದ್ದರು ಯಾಕೆ? ಈ ರೀತಿಯ ಹಿಂದುತ್ವ ಸ್ವಾರ್ಥಕ್ಕೆ ಬಳಕೆ ಮಾಡಿಕೊಂಡರು ಎಂಬ ಕಾರಣದಿಂದ ವಿಮುಖರಾದರು ಎಂದು ಹೇಳಿದರು.

ಬಿಜೆಪಿ ಈ ರೀತಿಯೆಲ್ಲ ಮಾತನಾಡುವ ಬದಲು ಮೊದಲು ರಾಮಮಂದಿರಕ್ಕೆ ದಲಿತರನ್ನು ಬಿಡಲು ಹೇಳಿ. ಅಲ್ಲಿ ಒರ್ವ ದಲಿತ ಅರ್ಚಕನನ್ನು ನೇಮಿಸಲು ಹೇಳಿ. ಹಿಂದೂಗಳಿಗೆ ಅವರು ಏನು ಮಾಡಿದ್ದಾರೆ? ಬರೀ ಚುನಾವಣೆಗೋಸ್ಕರ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

Advertisement
Next Article