ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಬಿವೈ ರಾಘವೇಂದ್ರ ಕನಿಷ್ಠ 3ಲಕ್ಷ ಮತಗಳಿಂದ ಗೆಲ್ಲುತ್ತಾರೆ'- ಬಿಎಸ್ ಯಡಿಯೂರಪ್ಪ

02:20 PM Apr 23, 2024 IST | Bcsuddi
Advertisement

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಕನಿಷ್ಟ ಮೂರು ಲಕ್ಷ ಮತಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಪಕ್ಷದ ಶಿಸ್ತು ಸಮಿತಿಯ ನಿರ್ಧಾರ ಮತ್ತು ಪ್ರಾಯಶಃ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಅನಿಸುತ್ತೆ. ತಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಂತೆ ರಾಜ್ಯ ಬಿಜೆಪಿ ಘಟಕದಲ್ಲೂ ಒಂದು ಶಿಸ್ತು ಸಮಿತಿ ಇದೆ. ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದರು.

Advertisement
Next Article