For the best experience, open
https://m.bcsuddi.com
on your mobile browser.
Advertisement

ಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಕಳಿಸಿದ ಸಿ.ಪಿ ಯೋಗೇಶ್ವರ್

01:03 PM Oct 23, 2024 IST | BC Suddi
ಬಿ ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಕಳಿಸಿದ ಸಿ ಪಿ ಯೋಗೇಶ್ವರ್
Advertisement

ಬೆಂಗಳೂರು: ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ದಯವಿಟ್ಟು ಪರಿಗಣಿಸಿ ಎಂದು ಕೈ ಬರಹದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಪತ್ರವನ್ನ ಸಿ.ಪಿ ಯೋಗೇಶ್ವರ್ ಕಳಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ನಾಯಕರಿಗೆ ಸಿಪಿ ಯೋಗೇಶ್ವರ್ ಸಡ್ಡು ಹೊಡೆದಿದ್ದಾರೆ.

ಬಿಜೆಪಿಯಿಂದಲ್ಲೇ ಸ್ಪರ್ಧೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದ ಸಿಪಿ ಯೋಗೇಶ್ವರ್ ಗೆ ಬಿಜೆಪಿಯಲ್ಲಿ ಸರಿಯಾದ ಬೆಂಬಲ ಸಿಗಲಿಲ್ಲ, ಜೆಡಿಎಸ್ ಚೆಹ್ನೆಯಡಿ ಸ್ಪರ್ಧೆ ಮಾಡಲು ನಿರಾಕರಿಸಿದ ಸಿಪಿ ಯೋಗೇಶ್ವರ್ ನಿನ್ನೆ ಸಂಜೆ ತನಕವೂ ಕಾದರು ಯಾವುದೇ ಬದಲಾವಣೆಯಾಗದ ಹಿನ್ನೆಲೆಯಲ್ಲಿ ಇಂದು ಸಿಎಂ ಡಿಸಿಎಂರನ್ನ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ನಾಳೆ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ.

Advertisement

Author Image

Advertisement