For the best experience, open
https://m.bcsuddi.com
on your mobile browser.
Advertisement

ಜೈ ಶ್ರೀ ರಾಮ್ ಘೋಷಣೆ ಭಕ್ತಿ ಹುಟ್ಟಿಸಬೇಕೇ ಹೊರತು ದ್ವೇಷವನ್ನಲ್ಲ' - ಈಶ್ವರ ಖಂಡ್ರೆ

05:21 PM Jan 22, 2024 IST | Bcsuddi
ಜೈ ಶ್ರೀ ರಾಮ್ ಘೋಷಣೆ ಭಕ್ತಿ ಹುಟ್ಟಿಸಬೇಕೇ ಹೊರತು ದ್ವೇಷವನ್ನಲ್ಲ    ಈಶ್ವರ ಖಂಡ್ರೆ
Advertisement

ಬೆಂಗಳೂರು: ಜೈ ಶ್ರೀ ರಾಮ್ ಘೋಷಣೆಯು ಭಕ್ತಿಯನ್ನು ಹುಟ್ಟಿಸಬೇಕೇ ಹೊರತು್ ದ್ವೇಷವನ್ನಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದೆ. ಸ್ವಾತಂತ್ರ್ಯದ ಬಳಿಕ ದೇಶದ ಆಡಳಿತದ ಚುಕ್ಕಾಣಿ ಹಿಡಿದು ನೂರಾರು ದೇವಾಲಯಗಳನ್ನು ಅಭಿವೃದ್ಧಿಪಡಿಸಿದೆ ಎಂದರು.

ಇನ್ನು ಮುಜರಾಯಿ ಇಲಾಖೆ ಮತ್ತು ಪುರಾತತ್ವ ಇಲಾಖೆ ಸ್ಥಾಪಿಸಿ ನೂರಾರು ದೇವಾಲಯಗಳನ್ನು ಸಂರಕ್ಷಣೆ ಮಾಡಿದೆ. ಆದರೆ ಎಂದಿಗೂ ದೇವಾಲಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ.

Advertisement

Author Image

Advertisement