ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು: ರಸ್ತೆಯಲ್ಲಿ ಮಹಿಳೆಗೆ ನಿಂದನೆ ಆರೋಪ-ನಟ ಶಿವರಾಜ್ ಕೆ.ಆರ್.ಪೇಟೆ ವಿರುದ್ಧ ದೂರು

05:39 PM Apr 01, 2024 IST | Bcsuddi
Advertisement

ಬೆಂಗಳೂರು: ರಸ್ತೆಯಲ್ಲಿ ಮಹಿಳೆಯೊಬ್ಬರ ದ್ವಿಚಕ್ರ ವಾಹನಕ್ಕೆ ಅಪಘಾತವೆಸಗಿ ಬಳಿಕ ನಿಂದಿಸಿರುವ ಆರೋಪ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಶಿವರಾಜ್ ಕೆ.ಆರ್ ಪೇಟೆ ವಿರುದ್ಧ ಕೇಳಿ ಬಂದಿದೆ.

Advertisement

ನಟ ಶಿವರಾಜ್ ಕೆಟ್ಟದಾಗಿ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ಸುಬ್ರಹ್ಮಣ್ಯನಗರ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 30ರಂದು ರಾತ್ರಿ 9:30ರ ಸುಮಾರಿಗೆ ಕೆಲಸ ಮುಗಿಸಿ ತೆರಳುತ್ತಿದ್ದ ಮಹಿಳೆಯ ದ್ವಿಚಕ್ರ ವಾಹನಕ್ಕೆ ರಾಜ್ ಕುಮಾರ್ ರಸ್ತೆಯ 10 ನೇ ಕ್ರಾಸ್ ಬಳಿ‌ ಶಿವರಾಜ್‌ರ ಕಾರ್ ಟಚ್ ಆಗಿತ್ತು. ಇದನ್ನ ಪ್ರಶ್ನಿಸಿದಾಗ ಶಿವರಾಜ್, 'ಯಾವಳೆ ನೀನು ಅಲ್ಲಾಡಿಸಿಕೊಂಡು ಹೋಗ್ತೀಯಾ?' ಎಂದು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಎನ್.ಸಿ.ಆರ್ ದಾಖಲಿಸಿಕೊಂಡ ಸುಬ್ರಹ್ಮಣ್ಯನಗರ ಠಾಣಾ ಪೊಲೀಸರು ಶಿವರಾಜ್ ರನ್ನ ಠಾಣೆಗೆ ಕರೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Advertisement
Next Article